Friday, March 13, 2026
HomeState198 ಕೋಟಿ ರೂ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಾಳೆ

198 ಕೋಟಿ ರೂ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಾಳೆ

ಬೆಟ್ಟದಪುರ: ಹಾರಂಗಿ ಜಲಾಶಯ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಿರುವ ಪಿರಿಯಾಪಟ್ಟಣ ಏತ ನೀರಾವರಿ ಯೋಜನೆಯ 52 ಕಿ.ಮೀ ಕಾಲುವೆ ಆಧುನೀಕರಣ ಕಾಮಗಾರಿಗಳಿಗೆ ರೂ. 198 ಕೋಟಿ ವೆಚ್ಚದಲ್ಲಿ ಗುದ್ದಲಿ ಪೂಜಾ ಕಾರ್ಯಕ್ರಮವು ಮಾರ್ಚ್ 07 ರಂದು ನಡೆಯಲಿದೆ.

 ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಲಿದ್ದು, ಯೋಜನೆಯಡಿ ಕಾಲುವೆಗಳ ಆಧುನೀಕರಣ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತದೆ.

ಈ ಕಾಮಗಾರಿಗಳಿಂದ ತಾಲ್ಲೂಕಿನ ಕೃಷಿಭೂಮಿಗಳಿಗೆ ನೀರಾವರಿ ಸೌಲಭ್ಯ ಸುಧಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ವರದಿ: ಪ್ರಸನ್ನ ಕುಮಾರ್ ಬಿ.ಎಸ್‌.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share