Saturday, May 30, 2026
HomeLocal Newsದಾಂಡೇಲಿ–ಬೆಂಗಳೂರು ನಡುವೆ ಪಲ್ಲಕ್ಕಿ ಸಂಚಾರ

ದಾಂಡೇಲಿ–ಬೆಂಗಳೂರು ನಡುವೆ ಪಲ್ಲಕ್ಕಿ ಸಂಚಾರ

ದಾಂಡೇಲಿ: ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ NWKRTC ದಾಂಡೇಲಿಯಿಂದ ಬೆಂಗಳೂರಿಗೆ ನೂತನ ಪಲ್ಲಕ್ಕಿ (ಎಸಿ ಸ್ಲೀಪರ್) ಬಸ್ ಸೇವೆಯನ್ನು ಆರಂಭಿಸಿದೆ.

ಈ ಸೇವೆಗೆ ಮಾಜಿ ಸಚಿವ ಹಾಗೂ ಶಾಸಕ R V Deshpande ಚಾಲನೆ ನೀಡಿದರು. ದಾಂಡೇಲಿ–ಬೆಂಗಳೂರು ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಎರಡು ಪಲ್ಲಕ್ಕಿ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗಿದೆ.

ಈ ನೂತನ ಬಸ್ ಸೇವೆಗಳು ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದಿಂದ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸುವ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿವೆ.

ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ಆರಾಮದಾಯಕ ಪ್ರಯಾಣ ಅನುಭವ ನೀಡುವ ಈ ಬಸ್‌ಗಳು ದೂರದ ಪ್ರಯಾಣಿಕರಿಗೆ ವಿಶೇಷವಾಗಿ ಸಹಾಯಕವಾಗಲಿವೆ.

ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಅತ್ಯಾಧುನಿಕ ಸಾರಿಗೆ ವ್ಯವಸ್ಥೆ ಒದಗಿಸುವ ಗುರಿಯನ್ನು ಹೊಂದಿದ್ದು, ಅದರ ಭಾಗವಾಗಿಯೇ ಈ ಹೊಸ ಸೇವೆಯನ್ನು ಪರಿಚಯಿಸಲಾಗಿದೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share