ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಹುಲಗಾನ ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿ ವರ್ಧಂತಿ ಉತ್ಸವ ಸೋಮವಾರ ಭಕ್ತಿಭಾವದಿಂದ ನೆರವೇರಿತು.
ದೇವರ ಸನ್ನಿಧಿಯಲ್ಲಿ ಶ್ರೀಲಕ್ಷ್ಮೀನರಸಿಂಹ ಜಪ, ಶ್ರೀಲಕ್ಷ್ಮೀನರಸಿಂಹ ಮೂಲಮಂತ್ರ ಹವನ, ಪುರುಷಸೂಕ್ತ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಾತೆಯರಿಂದ ಭಗವದ್ಗೀತಾ ಪಠಣ, ವಿಷ್ಣು ಸಹಸ್ರನಾಮ ಹಾಗೂ ಶಾಂಕರ ಸ್ತೋತ್ರಪಠಣವೂ ಜರುಗಿತು.
ನಂತರ ನಡೆದ ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಭಕ್ತರನ್ನು ರಂಜಿಸಿತು.
ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಜಿ.ಎಸ್. ಭಟ್ಟ, ಮೊಕ್ತೇಸರ ವೆಂಕಟ್ರಮಣ ಹೆಗಡೆ, ಎಸ್.ವಿ. ಹುಲಗಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.