ಭಟ್ಕಳ: ಮುರ್ಡೇಶ್ವರದ ಮಾತೋಬಾರ ದೇವಸ್ಥಾನ ಸಮೀಪದ ಬೀಚ್ನಲ್ಲಿ ಸಾರ್ವಜನಿಕವಾಗಿ ಗಾಂ*ಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಮಾವಳ್ಳಿ-01ರ ಹಿರೇದೊಮ್ಮಿ ನಿವಾಸಿ ಮೊಹಮ್ಮದ್ ಕೈಫ್ (20) ಎಂದು ಗುರುತಿಸಲಾಗಿದೆ.
ಮುರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಹಣಮಂತ ಬಿರಾದಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿತನನ್ನು ವಶಕ್ಕೆ ಪಡೆಯಲಾಗಿದೆ.
ಬಳಿಕ ಆರೋಪಿತನನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂ*ಜಾ ಸೇವನೆ ಪಾಸಿಟಿವ್ ಎಂದು ದೃಢಪಟ್ಟಿದೆ.
ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.