Saturday, May 30, 2026
HomeCrimeಅನಾರೋಗ್ಯ: ಜೀವನ ಯಾನ ಮುಗಿಸಿದ ವ್ಯಕ್ತಿ

ಅನಾರೋಗ್ಯ: ಜೀವನ ಯಾನ ಮುಗಿಸಿದ ವ್ಯಕ್ತಿ

ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾರದಾಗಳ್ಳಿ ನಿವಾಸಿ ಅಜೀಜ್ (38) ಮೃತ ವ್ಯಕ್ತಿಯಾಗಿದ್ದು, ಕಳೆದ ಒಂದು ವರ್ಷದ ಹಿಂದೆ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿ ಯಲ್ಲಾಪುರ, ಹುಬ್ಬಳ್ಳಿ ಹಾಗೂ ಗೋವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯದಲ್ಲಿ ಸಮರ್ಪಕ ಸುಧಾರಣೆ ಕಂಡುಬಾರದ ಹಿನ್ನೆಲೆಯಲ್ಲಿ ಅವರು ಮಾನಸಿಕವಾಗಿ ಬೇಸರಗೊಂಡಿದ್ದರು.

ಮೇ 1ರ ಮಧ್ಯಾಹ್ನದಿಂದ ಮೇ 2ರ ಬೆಳಿಗ್ಗೆಯೊಳಗಿನ ಅವಧಿಯಲ್ಲಿ ಕೆ.ಮಿಲಾನ್ ಹೋಟೆಲ್ ಸಮೀಪದ ಖಾಲಿ ಜಾಗದಲ್ಲಿರುವ ಮಾವಿನ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮೃತನ ಸಹೋದರ ಮಹಮ್ಮದ್ ಹುಸೇನ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನಲ್ಲಿ ಯಾವುದೇ ಅನುಮಾನ ಇಲ್ಲವೆಂದು ತಿಳಿಸಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share