ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ಸಂಭವಿಸಿದ ಟ್ಯಾಂಕರ್ ಅಪಘಾತದಲ್ಲಿ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ತೆಲಂಗಾಣ ರಾಜ್ಯದ ಜೋಗಲಾಂಬಾ ಗದ್ವಾಲ ಜಿಲ್ಲೆಯ ಪೈಪಾಡು ಗ್ರಾಮದ ವಡ್ಲ ಆಂಜನೇಯಲು (43) ಮೃತ ಚಾಲಕ. ಮೇ 4ರಂದು ಆಂಧ್ರ ಪ್ರದೇಶದ ಕರುನೂಲ್ನ ಖಾಸಗಿ ಕಂಪನಿಯಿಂದ ಹೈಡ್ರೋಕ್ಲೋರಿಕ್ ಆಸಿಡ್ ಸಾಗಣೆ ಮಾಡಿಕೊಂಡು ಟ್ಯಾಂಕರ್ನಲ್ಲಿ ಯಲ್ಲಾಪುರ ಮಾರ್ಗವಾಗಿ ಅಂಕೋಲಾಕ್ಕೆ ತೆರಳುತ್ತಿದ್ದ.
ಮೇ 5ರಂದು ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಅರಬೈಲ್ ಘಟ್ಟದ ತಿರುವಿನಲ್ಲಿ ಟ್ಯಾಂಕರ್ ಅನ್ನು ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.