ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಮುದ್ದಿನಗದ್ದೆ ಕ್ರಾಸ್ ಸಮೀಪ ಸಂಭವಿಸಿದ್ದ ಸ್ಕೂಟಿ ಮತ್ತು ಕಾರಿನ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಜೂನ್ 13ರಂದು ಬೆಳಿಗ್ಗೆ ಸುಮಾರು 10.14 ಗಂಟೆಗೆ ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸ್ಕೂಟಿ (ಕೆಎ-31/ಇಜಿ-0658) ಮತ್ತು ಎದುರಿನಿಂದ ಬರುತ್ತಿದ್ದ ಕಾರು (23-ಬಿಎಚ್-6731) ನಡುವೆ ಮುದ್ದಿನಗದ್ದೆ ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.
ಅಪಘಾತದಲ್ಲಿ ಸ್ಕೂಟಿ ಚಾಲಕ, ಹಿಟ್ಟಿನಬೈಲ-ಕನ್ನಡಗಲ್ಲ ನಿವಾಸಿ ರಾಘವೇಂದ್ರ ಚೂಡಾಮಣಿ ಮರಾಠಿ (41) ಗಂಭೀರವಾಗಿ ಗಾಯಗೊಂಡಿದ್ದರು. ಸ್ಕೂಟಿಯ ಹಿಂಬದಿ ಸವಾರ ದಯಾನಂದ ಚಂದ್ರು ನಾಯ್ಕ ಅವರಿಗೂ ತಲೆ, ಕೆನ್ನೆ, ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದವು. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದವು.
ಘಟನೆಯ ಸಂಬಂಧ ಕಾರು ಚಾಲಕ ಅಭಿಷೇಕ್ ಸಾರಸ್ವತ್ ಅವರ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಗಾಯಾಳು ರಾಘವೇಂದ್ರ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 14ರಂದು ಸಂಜೆ ಅವರು ಮೃತಪಟ್ಟಿದ್ದಾರೆ.