Friday, July 24, 2026
Join WhatsApp Group
HomeLocal Newsಮಿಸ್ಸಿಂಗ್‌ ಪ್ರಕರಣ ಸುಖಾಂತ್ಯ; ಒಪ್ಪಿದವರನ್ನೇ ವರಿಸಿದರು!

ಮಿಸ್ಸಿಂಗ್‌ ಪ್ರಕರಣ ಸುಖಾಂತ್ಯ; ಒಪ್ಪಿದವರನ್ನೇ ವರಿಸಿದರು!

ಅಂಕೋಲಾ: ಕಳೆದ ಕೆಲ ದಿನಗಳಿಂದ ಕಾಣೆಯಾಗಿದ್ದ ಅಂಕೋಲಾ ತಾಲೂಕಿನ ಇಬ್ಬರು ಯುವತಿಯರು ಸುರಕ್ಷಿತವಾಗಿದ್ದು, ತಾವು ಇಷ್ಟಪಟ್ಟ ಯುವಕರನ್ನು ವಿವಾಹವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಣಿ ಗಾಬಿತವಾಡಾದ ಸಾಕ್ಷಿ ಸೂರ್ಯಕಾಂತ ಚೋಡಣಕರ (19) ಅವರು ಜೂನ್ 23ರಂದು ಮನೆಯಿಂದ ಹೊರಗೆ ಹೋದ ಬಳಿಕ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಬಳಿಕ ಪೊಲೀಸರಿಗೆ ದೂರು ನೀಡಿದ್ದರು.

ಇದೇ ರೀತಿ ಕುಂಟಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೊಳ್ಳಿ ಗ್ರಾಮದ ಶ್ರೀದೇವಿ ಈಶ್ವರ ಗೌಡ (18) ಅವರು ಜೂನ್ 24ರಂದು ತಾಯಿಗೆ ಔಷಧಿ ತರಲು ಶಿರಸಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಅವರು ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಪೊಲೀಸರ ಮೊರೆ ಹೋಗಿದ್ದರು.

ಈಗ ಇಬ್ಬರೂ ಯುವತಿಯರು ಸುರಕ್ಷಿತವಾಗಿದ್ದು, ತಮ್ಮ ಇಚ್ಛೆಯಂತೆ ವಿವಾಹವಾಗಿರುವ ಮಾಹಿತಿ ಲಭ್ಯವಾಗಿದೆ. ಶ್ರೀದೇವಿ ಗೌಡ ಅವರು ಯಲ್ಲಾಪುರದ ದೇವಿ ದೇವಸ್ಥಾನದಲ್ಲಿ ವಿವಾಹವಾಗಿದ್ದರೆ, ಸಾಕ್ಷಿ ಚೋಡಣಕರ ಅವರು ತಾವು ಪ್ರೀತಿಸುತ್ತಿದ್ದ ಸಂಬಂಧಿ ಯುವಕನನ್ನು ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರೂ ವಯಸ್ಕರಾಗಿದ್ದು, ತಮ್ಮ ಇಚ್ಛೆಯಂತೆ ವಿವಾಹವಾಗಿರುವುದಾಗಿ ತಿಳಿದುಬಂದಿರುವ ಹಿನ್ನೆಲೆಯಲ್ಲಿ, ಪ್ರಕರಣ ಸದ್ಯಕ್ಕೆ ಸುಖಾಂತ್ಯವಾದ ಲಕ್ಷಣ ಕಂಡುಬಂದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share