Friday, July 24, 2026
Join WhatsApp Group
HomeLocal Newsಪುರೋಹಿತರಿಗೆ ಕಾಡಿದ ಜಲಕಂಟಕ

ಪುರೋಹಿತರಿಗೆ ಕಾಡಿದ ಜಲಕಂಟಕ

ಕಾಲು ಜಾರಿ ಬಾವಿಗೆ ಬಿದ್ದು ಸಾ*ವು

ಕುಮಟಾ: ಮನೆ ಹಿಂಭಾಗದ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ನೆಲಬಾವಿಗೆ ಬಿದ್ದ ಪರಿಣಾಮ ಪೌರೋಹಿತ್ಯ ವೃತ್ತಿಯ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕುಮಟಾ ತಾಲೂಕಿನ ಶಿರಗುಂಜಿ-ಕತಗಾಲ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗೋಪಾಲಕೃಷ್ಣ ವಿಷ್ಣು ಭಟ್ಟ (58) ಎಂದು ಗುರುತಿಸಲಾಗಿದೆ. ಅವರು ಪೌರೋಹಿತ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.

ಜುಲೈ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ನಡುವಿನ ಅವಧಿಯಲ್ಲಿ ಗೋಪಾಲಕೃಷ್ಣ ಭಟ್ಟ ಅವರು ತಮ್ಮ ಮನೆಯ ಹಿಂಭಾಗದ ತೋಟದಲ್ಲಿ ಕೃಷಿ ಕೆಲಸಕ್ಕೆ ತೆರಳಿದ್ದರು.

ಈ ವೇಳೆ ಸುರಿದ ಭಾರಿ ಮಳೆಯಿಂದ ಬಾವಿಯಲ್ಲಿ ನೀರು ತುಂಬಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮೃತರ ಪತ್ನಿ ಜಯಲಕ್ಷ್ಮೀ ಗೋಪಾಲಕೃಷ್ಣ ಭಟ್ಟ ಅವರು ನೀಡಿದ ಮಾಹಿತಿ ಆಧರಿಸಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಕುರಿತು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share