ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ; ಬೈಕ್ ಹಿಂಬದಿ ಸವಾರ ಬಲಿ
ಕಾರವಾರ: ರಾಷ್ಟ್ರೀಯ ಹೆದ್ದಾರಿ–66ರ ಮಾಜಾಳಿ ಗಾಂವಗೇರಿ ಕ್ರಾಸ್ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಜುಲೈ 9ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬಿಣಗಾ ನಿವಾಸಿ ವಿಜಯ (30) ಅವರು ಬೈಕ್ನಲ್ಲಿ ಮಹೇಂದ್ರ ಅವರನ್ನು ಹಿಂಬದಿ ಕೂರಿಸಿಕೊಂಡು ಮಾಜಾಳಿಯಿಂದ ಕಾರವಾರದ ಕಡೆಗೆ ತೆರಳುತ್ತಿದ್ದರು.
ಈ ವೇಳೆ ಗಾಂವಗೇರಿ ಕ್ರಾಸ್ ಸಮೀಪ ರಸ್ತೆಗೆ ದನ ಅಡ್ಡ ಬಂದ ಪರಿಣಾಮ ಬೈಕ್ನ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರ ವಿಜಯ ಅವರ ಕಾಲಿಗೆ ಗಾಯಗಳಾಗಿದ್ದು, ಹಿಂಬದಿ ಸವಾರ ಮಹೇಂದ್ರ ಅವರ ತಲೆಗೆ ಗಂಭೀರ ಗಾಯಗಳಾಗಿತ್ತು.
ಗಾಯಾಳುಗಳನ್ನು ತಕ್ಷಣ ಕಾರವಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹೇಂದ್ರ ಮೃತಪಟ್ಟಿದ್ದಾರೆ.
ಈ ಸಂಬಂಧ ತೋಡೂರು ನಿವಾಸಿ ಶ್ಯಾಮು (43) ಅವರು ನೀಡಿದ ದೂರಿನ ಮೇರೆಗೆ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
majali-bike-accident-pillion-rider-dies-after-cow-crosses-nh66