Friday, July 24, 2026
Join WhatsApp Group
HomeLocal Newsಯಲ್ಲಾಪುರ: ವಿದ್ಯಾರ್ಥಿಗಳನ್ನು ಬೆದರಿಸಿದ ಅಪರಿಚಿತರು?

ಯಲ್ಲಾಪುರ: ವಿದ್ಯಾರ್ಥಿಗಳನ್ನು ಬೆದರಿಸಿದ ಅಪರಿಚಿತರು?

ಯಲ್ಲಾಪುರ: ಯಲ್ಲಾಪುರ ತಾಲೂಕಿನ ಬಾರೆ ಕತ್ರಿಯಿಂದ ಮಲವಳ್ಳಿಗೆ ಹೋಗುವ ಮಾರ್ಗದ ಜೋಗಾಳಕೇರಿ ಶಾಲೆ ಸಮೀಪ ವಿದ್ಯಾರ್ಥಿಗಳನ್ನು ಅಪರಿಚಿತರು ಬಲವಂತವಾಗಿ ವಾಹನಕ್ಕೆ ಕೂರಿಸಲು ಯತ್ನಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದ್ದು, ಪಾಲಕರಲ್ಲಿ ಆತಂಕ ಮೂಡಿಸಿದೆ.

 ಜುಲೈ 16ರಂದು ಸಂಜೆ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬಳಿ ಕಾರಿನಲ್ಲಿ ಬಂದ ಅಪರಿಚಿತರು ಮಾತನಾಡಿಸಿ ವಾಹನಕ್ಕೆ ಕೂರಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಸಂಜೆಸೂರ್ಯ ಮೀಡಿಯಾ YouTube ನಲ್ಲಿ ವಿಡಿಯೋ ನೋಡಿ 👇https://youtube.com/shorts/oYFfeMlcSm0?si=cCTPgrwuwULj79Ul

ಇದರಿಂದ ಹೆದರಿದ ವಿದ್ಯಾರ್ಥಿಗಳು ಸಮೀಪದ ಮನೆಯೊಂದರಲ್ಲಿ ಆಶ್ರಯ ಪಡೆದು ಬಳಿಕ ಸುರಕ್ಷಿತವಾಗಿ ಮನೆ ತಲುಪಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಈ ಘಟನೆಯ ಕುರಿತು ಪೊಲೀಸರು ಅಥವಾ ಶಿಕ್ಷಣ ಇಲಾಖೆ ಅಧಿಕೃತವಾಗಿ ಯಾವುದೇ ಮಾಹಿತಿ ಅಥವಾ ದೃಢೀಕರಣ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳಿಗೆ ಅಪರಿಚಿತರೊಂದಿಗೆ ಮಾತನಾಡದಂತೆ, ಅವರ ವಾಹನಗಳನ್ನು ಹತ್ತದಂತೆ ಹಾಗೂ ಯಾವುದೇ ಅನುಮಾನಾಸ್ಪದ ಘಟನೆ ಕಂಡುಬಂದರೆ ಕೂಡಲೇ ಶಿಕ್ಷಕರು, ಪಾಲಕರು ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸುವುದು ಅಗತ್ಯವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share