ಮುಂಡಗೋಡ: ಪರಿಸರ ಸಂರಕ್ಷಣೆ ಹಾಗೂ ಉರಗ ರಕ್ಷಣೆಯಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಮುಂಡಗೋಡ ತಾಲೂಕಿನ ಕಾತೂರು ವಲಯದ ಪಾಳಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಹೊನ್ನಾವರ ಅವರನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಮುಂಡಗೋಡ ತಾಲೂಕಿನ ಪಾಳ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಪಾಲಕರ ಸಭೆ ಹಾಗೂ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಈ ಸನ್ಮಾನ ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಸುನೀಲ್ ಹೊನ್ನಾವರ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಉರಗ ರಕ್ಷಣೆಯಲ್ಲಿ ಅವರು ಸಲ್ಲಿಸುತ್ತಿರುವ ಅವಿರತ ಸೇವೆಯನ್ನು ಶ್ಲಾಘಿಸಿದ ಆಡಳಿತ ಮಂಡಳಿಯವರು, ಇದೇ ರೀತಿಯ ಸಮಾಜಮುಖಿ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.