Monday, September 7, 2026
Join WhatsApp Group
HomeLocal Newsಸಾವು ಕಂಡರೂ ಎಚ್ಚರಗೊಳ್ಳದ ಪ್ರವಾಸಿಗರು!

ಸಾವು ಕಂಡರೂ ಎಚ್ಚರಗೊಳ್ಳದ ಪ್ರವಾಸಿಗರು!

ಅಪಾಯದ ಅಲೆಯಲ್ಲೇ ಮೋಜು | ಆಡಳಿತಕ್ಕೆ ತಪ್ಪದ ತಲೆಬೇನೆ

ಕಾರವಾರ: ಅರಬ್ಬಿ ಸಮುದ್ರ ಮಳೆಗಾಲದಲ್ಲಿ ದಿನದಿಂದ ದಿನಕ್ಕೆ ಉಗ್ರ ಸ್ವರೂಪ ತಾಳುತ್ತಿದ್ದರೂ, ಕಾರವಾರ ಕಡಲತೀರದಲ್ಲಿ ಪ್ರವಾಸಿಗರ ನಿರ್ಲಕ್ಷ್ಯ ಮಾತ್ರ ಮುಂದುವರಿದಿದೆ. ಎರಡು ದಿನಗಳ ಹಿಂದಷ್ಟೇ ಸಮುದ್ರಕ್ಕಿಳಿದಿದ್ದ ಪ್ರವಾಸಿಯೊಬ್ಬರು ಅಲೆಗಳ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದರೂ, ಅದರಿಂದ ಪಾಠ ಕಲಿಯದ ಹಲವರು ಮತ್ತೆ ಅಪಾಯದ ಅಲೆಗಳ ನಡುವೆ ಇಳಿದು ಮೋಜು ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಉತ್ತರ ಕನ್ನಡ ಜಿಲ್ಲಾಡಳಿತ, ಕಾರವಾರ ಪೊಲೀಸರು ಹಾಗೂ ಜೀವರಕ್ಷಕ ಸಿಬ್ಬಂದಿ ಮಳೆಗಾಲದಲ್ಲಿ ಸಮುದ್ರಕ್ಕಿಳಿಯದಂತೆ ಪದೇಪದೇ ಮನವಿ ಮಾಡುತ್ತಿದ್ದಾರೆ. ಬಲವಾದ ಅಲೆಗಳು ಹಾಗೂ ಅಪಾಯಕಾರಿ ನೀರಿನ ಸೆಳೆತದ ಬಗ್ಗೆ ಎಚ್ಚರಿಕೆ ನೀಡುವ ಸೂಚನಾ ಫಲಕಗಳನ್ನೂ ಕಡಲತೀರದಲ್ಲಿ ಅಳವಡಿಸಲಾಗಿದೆ. ಆದರೂ ಅನೇಕ ಪ್ರವಾಸಿಗರು ಈ ಎಚ್ಚರಿಕೆಗಳನ್ನು ಲೆಕ್ಕಿಸದೆ ಸಮುದ್ರದೊಳಗೆ ಇಳಿಯುತ್ತಿರುವುದು ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

ವಿಶೇಷವಾಗಿ, ಪುಟ್ಟ ಮಕ್ಕಳನ್ನೂ ಸಮುದ್ರದ ನೀರಿಗೆ ಕರೆದೊಯ್ಯುತ್ತಿರುವ ಕೆಲ ಪೋಷಕರ ನಿರ್ಲಕ್ಷ್ಯದ ಬಗ್ಗೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ಸಮುದ್ರದ ಅಲೆಗಳ ಸ್ವರೂಪ ಕ್ಷಣಾರ್ಧದಲ್ಲಿ ಬದಲಾಗುವ ಕಾರಣ, ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಜೀವರಕ್ಷಕ ಸಿಬ್ಬಂದಿ ಎಚ್ಚರಿಸಿದ್ದಾರೆ.

ಪ್ರವಾಸಿಗರು ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು. ಜಿಲ್ಲಾಡಳಿತ, ಪೊಲೀಸ್ ಹಾಗೂ ಜೀವರಕ್ಷಕರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮಳೆಗಾಲ ಮುಗಿಯುವವರೆಗೆ ಸಮುದ್ರಕ್ಕಿಳಿಯುವುದನ್ನು ಸಂಪೂರ್ಣವಾಗಿ ತಪ್ಪಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮತ್ತೊಮ್ಮೆ ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share