ಕಾರವಾರ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ದೊರೆಯುವ ವಾರ್ಷಿಕ 6 ಸಾವಿರ ರೂ ಸಹಾಯಧನ ಪಡೆಯಲು ರೈತರು ಪ್ರತಿ ವರ್ಷವೂ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.
ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರದಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6 ಸಾವಿರ ರೂ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಆದರೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಯೋಜನೆಯ ಸೌಲಭ್ಯ ಪಡೆಯುವಲ್ಲಿ ತೊಂದರೆಯಾಗುವ ಸಾಧ್ಯತೆಯಿದೆ.
ರೈತರು ಇ-ಕೆವೈಸಿ ಪೂರ್ಣಗೊಳಿಸಲು ಎರಡು ವಿಧಾನಗಳನ್ನು ಬಳಸಬಹುದು. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಗಾಗಿ ಸಮೀಪದ ಗ್ರಾಹಕ ಸೇವಾ ಕೇಂದ್ರ (CSC), ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಕ್ಕೆ ತೆರಳಿ ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆಯ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ಇನ್ನು ಮನೆಯಿಂದಲೇ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಮಾಡಿಕೊಳ್ಳಲು ವಿಎನ್ಓ ಆಪ್ ಬಳಸಬಹುದಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪಿಎಂ ಕಿಸಾನ್ ಯೋಜನೆಯ ಹಲವು ಫಲಾನುಭವಿಗಳ ಇ-ಕೆವೈಸಿ ಇನ್ನೂ ಬಾಕಿ ಇರುವ ಹಿನ್ನೆಲೆಯಲ್ಲಿ, ರೈತರು ತಡಮಾಡದೇ ಬಯೋಮೆಟ್ರಿಕ್ ಅಥವಾ ಮೊಬೈಲ್ ಆಪ್ ಮೂಲಕ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.