ಯಲ್ಲಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ 63 ವರ್ಷದ ಕೃಷಿಕರೊಬ್ಬರು ಆ*ತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಲಾಲಗುಳಿ ಗ್ರಾಮದಲ್ಲಿ ನಡೆದಿದೆ.
ಮೃ*ತರನ್ನು ಕೃಷ್ಣ ಶಿವಾ ಮರಾಠಿ (63) ಎಂದು ಗುರುತಿಸಲಾಗಿದೆ. ಅವರು ಲಾಲಗುಳಿ ಹಳಬೈಲ್ ಗ್ರಾಮದ ನಿವಾಸಿಯಾಗಿದ್ದು, ಕೃಷಿ ಕೆಲಸ ಮಾಡಿಕೊಂಡಿದ್ದರು.
ಪೊಲೀಸ್ ದೂರಿನ ಪ್ರಕಾರ, ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಬೇಸತ್ತು ಆ.30ರ ರಾತ್ರಿ 9 ಗಂಟೆಯಿಂದ ಆ.31ರ ಬೆಳಗ್ಗೆ 6.30ರ ನಡುವಿನ ಅವಧಿಯಲ್ಲಿ ಮನೆಯ ಪಕ್ಕದ ಗಿಡದ ಕೊಂಬೆಗೆ ನೇಣು ಹಾಕಿಕೊಂಡು ಮೃ*ತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಮೃತರ ಪುತ್ರ ರವಿ ಕೃಷ್ಣ ಮರಾಠಿ ಅವರು ಯಲ್ಲಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಂದೆಯ ಸಾ_ವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.