Monday, September 7, 2026
Join WhatsApp Group
HomeLocal Newsಅಂಕೋಲಾ | ಸಂತೆಪೇಟೆಯಲ್ಲಿ ಹೊಸ ವಾಹನ ಅಪಘಾತ: ಚಾಲಕನಿಗೆ ಗಾಯ

ಅಂಕೋಲಾ | ಸಂತೆಪೇಟೆಯಲ್ಲಿ ಹೊಸ ವಾಹನ ಅಪಘಾತ: ಚಾಲಕನಿಗೆ ಗಾಯ

ಅಂಕೋಲಾ: ಎದುರಿನಿಂದ ಲಾರಿ ಬರುತ್ತಿರುವುದನ್ನು ಕಂಡು ವಾಹನವನ್ನು ಎಡಭಾಗಕ್ಕೆ ತೆಗೆದುಕೊಂಡಾಗ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಸಂತೆಪೇಟೆ ಬಳಿ ನಡೆದಿದೆ.

ಜುಲೈ 4ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಸಂತೆಪೇಟೆಯಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿ 143ರ ಡಾಂಬರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ತಿಳಿಸಲಾಗಿದೆ.

ತಡಸ ಗ್ರಾಮದ ಸಲೀಂ ತಂದೆ ಮೌಲಾಸಾಬ ಕಂದಗಲ್ಲ ಎಂಬವರು ಹೊಸ ವಾಹನವನ್ನು ಚಲಾಯಿಸಿಕೊಂಡು ತೆರಳುತ್ತಿದ್ದಾಗ, ಎದುರಿನಿಂದ ಲಾರಿಯೊಂದು ಬರುತ್ತಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಲಾರಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ವಾಹನವನ್ನು ರಸ್ತೆಯ ಎಡಭಾಗಕ್ಕೆ ಕೆಳಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಆದರೆ ಈ ಸಂದರ್ಭದಲ್ಲಿ ವಾಹನದ ಮೇಲಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪರಿಣಾಮ ಚಾಲಕ ಸಲೀಂ ಅವರ ಎಡಗಾಲಿಗೆ ಗಾಯ ಹಾಗೂ ನೋವುಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share