ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮನವಿ
ಯಲ್ಲಾಪುರ: ಕಾಯಕಯೋಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಂದು ಸಂಜೆ ಪ್ರತಿಯೊಬ್ಬರೂ ನಮ್ಮ ಮನೆಗಳಲ್ಲಿ ದೀಪ ಬೆಳಗಿಸುವ ಮೂಲಕ ಜಗಮೆಚ್ಚಿದ ನಾಯಕನಿಗೆ ಶುಭ ಹಾರೈಸೋಣ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮನವಿ ಮಾಡಿದ್ದಾರೆ.
ಈ ಕುರಿತು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಸೆಪ್ಟೆಂಬರ್ 17ರಂದು ಸಂಜೆ ಮನೆಯಂಗಳದಲ್ಲಿ ಅಥವಾ ಮನೆ ಬಾಗಿಲಲ್ಲಿ ದೀಪ ಬೆಳಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನಿ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಇದೇ ಸೆ.17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ಬಿಜೆಪಿ ವತಿಯಿಂದ ದೇಶಾದ್ಯಂತ ವಿವಿಧ ಸೇವಾ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಇದರ ಭಾಗವಾಗಿ ಮನೆ-ಮನೆಗಳಲ್ಲಿ ದೀಪ ಬೆಳಗಿಸುವ ಮೂಲಕ ಜನರು ಈ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮನವಿ ಮಾಡಿದ್ದಾರೆ. ಅದರಂತೆ ರಾಜ್ಯದಲ್ಲಿಯೂ ಸಾರ್ವಜನಿಕರ ಸಹಭಾಗಿತ್ವ ಕೋರಲಾಗುತ್ತಿದೆ ಎಂದು ಹರಿಪ್ರಕಾಶ ಕೋಣೆಮನೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಕೇವಲ ರಾಜಕೀಯ ಕಾರ್ಯಕ್ರಮವಾಗಿ ಸೀಮಿತಗೊಳಿಸದೆ, ಜನರ ಪಾಲ್ಗೊಳ್ಳುವಿಕೆಯೊಂದಿಗೆ ಆಚರಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೀಪ ಬೆಳಗಿಸುವ ಮೂಲಕ ಶುಭ ಹಾರೈಸುವುದರ ಜೊತೆಗೆ, ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಾರ್ವಜನಿಕರು ಕೈಜೋಡಿಸಬೇಕು ಎಂಬ ಆಶಯವನ್ನು ಪಕ್ಷ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 17ರಂದು ಸಂಜೆ ನಿಗದಿತ ಸಮಯದಲ್ಲಿ ತಮ್ಮ ಮನೆಗಳಲ್ಲಿ ದೀಪ ಬೆಳಗಿಸುವ ಮೂಲಕ ಈ ವಿಶೇಷ ಆಚರಣೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಅವರು ಮನವಿ ಮಾಡಿದ್ದಾರೆ.
ಮನೆಯಂಗಳದಲ್ಲಿ ಅಥವಾ ಮನೆಯ ಮುಂದೆ ದೀಪ ಬೆಳಗಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯ ಕೋರೋಣ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಹರಿಪ್ರಕಾಶ ಕೋಣೆಮನೆ ಮನವಿ ಮಾಡಿದ್ದಾರೆ.