Friday, July 24, 2026
Join WhatsApp Group
HomeLocal Newsಅರಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ: ಲಾರಿ ಮಾಲಕನ ಬದುಕು ಅಂತ್ಯ  

ಅರಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ: ಲಾರಿ ಮಾಲಕನ ಬದುಕು ಅಂತ್ಯ  

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಜಾವೇದ್ ಕಮರುದ್ದೀನ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಹರಿಯಾಣ ರಾಜ್ಯದ ಪಲ್ವಲ್ ಜಿಲ್ಲೆಯ ನಿವಾಸಿಯಾಗಿದ್ದು, ಲಾರಿ ಮಾಲೀಕರಾಗಿದ್ದರು ಎಂದು ತಿಳಿದುಬಂದಿದೆ.

ದೆಹಲಿಯಿಂದ ಕಬ್ಬಿಣದ ಪೈಪ್‌ಗಳನ್ನು ತುಂಬಿಕೊಂಡು ಕೇರಳದ ತಿರುವನಂತಪುರಕ್ಕೆ ತೆರಳುತ್ತಿದ್ದ ಲಾರಿ ಅರಬೈಲ್ ಘಟ್ಟದ ಬಳಿ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಚಾಲಕ ನಜೀರ್ ಮಹಾಜುದ್ದೀನ್ ಲಾರಿಯನ್ನು ಎಡಬದಿಗೆ ತಿರುಗಿಸಿದ್ದು, ಈ ವೇಳೆ ಲಾರಿ ನಿಯಂತ್ರಣ ತಪ್ಪಿ ಘಟ್ಟದಲ್ಲಿ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತ ಸಂಭವಿಸುವ ವೇಳೆ ಲಾರಿಯಲ್ಲಿದ್ದ ಜಾವೇದ್ ಕಮರುದ್ದೀನ್ ವಾಹನದಿಂದ ಜಿಗಿದಿದ್ದು, ಅವರ ಮೇಲೆಯೇ ಲಾರಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share