ಯಲ್ಲಾಪುರ: ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಯಮ್ಮಗುಂಡಿ ಗೌಳಿವಾಡದ ಭಾರತೀಯ ಜನತಾ ಪಕ್ಷದ ಹಲವು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ ಅವರು ನೂತನ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಗಂಗಾರಾಮ ಕೊಕರೆ, ಗಂಗಾರಾಮ ದೊಳು ಕೊಕರೆ, ಗಂಗಾರಾಮ ಬರಗಡೆ, ಬಾಗು ಕೊಕರೆ, ಸೊನು ಕೊಕರೆ, ಚಾಂಗೂ ಬರಗಡೆ, ಕೊಂಡು ಕೊಕರೆ, ಭರತ ಬರಗಡೆ, ಬಮ್ಮು ಬರಗಡೆ, ರಾಮು ಕೊಕರೆ, ಜಗ್ಗು ಕೊಕರೆ, ವಾಘು ಕೊಕರೆ ಹಾಗೂ ಬಬ್ಬನ ಬರಗಡೆ ಸೇರಿದಂತೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವವನ್ನು ಮೆಚ್ಚಿ ಪಕ್ಷ ಸೇರ್ಪಡೆಯಾದರು.
ಬಳಿಕ ನೂತನವಾಗಿ ಸೇರ್ಪಡೆಯಾದ ಕಾರ್ಯಕರ್ತರು ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಮುಂದಿನ ರಾಜಕೀಯ ಚಟುವಟಿಕೆಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಪಡೆದರು.
ಕಾಂಗ್ರೆಸ್ ಪಕ್ಷ ಸೇರ್ಪಡೆಯಿಂದ ಕರಿಯಮ್ಮಗುಂಡಿ ಭಾಗದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.