Friday, July 24, 2026
Join WhatsApp Group
HomeCrimeಗುತ್ತಿಗೆದಾರನಿಂದ ಧಮಕಿ; ಶಿರಸಿಯಲ್ಲಿ ಪ್ರಕರಣ ದಾಖಲು

ಗುತ್ತಿಗೆದಾರನಿಂದ ಧಮಕಿ; ಶಿರಸಿಯಲ್ಲಿ ಪ್ರಕರಣ ದಾಖಲು

ಶಿರಸಿ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRDCL) ಕಚೇರಿಯ ಎಫ್‌ಡಿಸಿ ನೌಕರನಿಗೆ ಗುತ್ತಿಗೆದಾರನೊಬ್ಬ ಜೀವ ಬೆದರಿಕೆ ಹಾಕಿದ ಆರೋಪದಡಿ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳಗಿ ನಿವಾಸಿ ಪುನೀತ್ ಮಂಜುನಾಥ ಭರತನಹಳ್ಳಿ (38) ನೀಡಿದ ದೂರಿನ ಮೇರೆಗೆ ಸಂಗಮೇಶ್ವರ ಮಹಾಬಲೇಶ್ವರ ಕಟ್ಟಿ ಹಾಗೂ ಇನ್ನು ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಗಮೇಶ್ವರ ಕಟ್ಟಿಗೆ ವಿವಿಧ ಜಿಲ್ಲೆಗಳ ಬಿಸಿ‌ಎಂ ಹಾಸ್ಟೆಲ್‌ಗಳ ದುರಸ್ತಿ ಹಾಗೂ ನವೀಕರಣ ಕಾಮಗಾರಿಗಳ ಗುತ್ತಿಗೆ ನೀಡಲಾಗಿತ್ತು. ಬಳಿಕ ಮೇ 1ರಿಂದ ಆರೋಪಿತನು ಕಚೇರಿ ಹಾಗೂ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾ, ಬಿಲ್‌ಗಳನ್ನು ಒದಗಿಸದಿದ್ದರೆ ಬ್ಲ್ಯಾಕ್‌ಮೇಲ್ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.

ಮೇ 18ರಂದು ಮಧ್ಯಾಹ್ನ ಕಚೇರಿಯಲ್ಲಿ ದೂರುದಾರರು ಇಲ್ಲದ ವೇಳೆ ಆರೋಪಿತನು ಇನ್ನೂ ಮೂವರೊಂದಿಗೆ ಬಂದು ಕಚೇರಿಯಲ್ಲಿ ಅಸಭ್ಯ ವರ್ತನೆ ತೋರಿದ್ದು, ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಹೋದ್ಯೋಗಿಗಳು ಮಾಹಿತಿ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share