Friday, July 24, 2026
Join WhatsApp Group
HomeUncategorizedದೇವಸ್ಥಾನ ಹಕ್ಕು ವಿಚಾರದಲ್ಲಿ ಮಾರಾಮಾರಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ದೇವಸ್ಥಾನ ಹಕ್ಕು ವಿಚಾರದಲ್ಲಿ ಮಾರಾಮಾರಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಹಾವೇರಿ: ಆಸ್ತಿ, ಮನೆ ಅಥವಾ ಬೆಲೆಬಾಳುವ ವಸ್ತುಗಳ ವಿಚಾರವಾಗಿ ಜಗಳವಾಗುವುದು ಸಾಮಾನ್ಯ. ಆದರೆ ದೇವಸ್ಥಾನದ ಮೇಲಿನ ಹಕ್ಕಿಗಾಗಿ ಎರಡು ಗ್ರಾಮಗಳ ನಡುವೆ ಭೀಕರ ಸಂಘರ್ಷ ನಡೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಿರೇ ಯಡಚಿ ಮತ್ತು ಕ್ಯಾತನಕೇರಿ ಗ್ರಾಮಸ್ಥರ ನಡುವೆ ದೇವಸ್ಥಾನದ ಹಕ್ಕು ಹಾಗೂ ಆಡಳಿತದ ವಿಚಾರವಾಗಿ ಬಹುಕಾಲದಿಂದಲೂ ಇರುವ ಉದ್ವಿಗ್ನತೆ ಗುರುವಾರ ಹಿಂಸಾತ್ಮಕ ರೂಪ ಪಡೆದುಕೊಂಡಿದೆ.

ಗುಡ್ಡದ ಮೇಲಿರುವ ಹಳೆಯ ದೇವಸ್ಥಾನದ ಬಳಿಯಲ್ಲಿ ಹೊಸ ದೇವಸ್ಥಾನ ನಿರ್ಮಿಸಲು ಹಿರೇ ಯಡಚಿ ಗ್ರಾಮಸ್ಥರು ಮುಂದಾಗಿದ್ದರು. ಇದೇ ವೇಳೆ ಮಾರ್ಚ್ 9ರಿಂದ ದುರಗಮ್ಮನ ಜಾತ್ರೆಯನ್ನು ಅದ್ಧೂರಿಯಾಗಿ ನಡೆಸಲು ನಿರ್ಧರಿಸಿ, ಮಂಟಪ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಇದನ್ನು ವಿರೋಧಿಸಿದ ಕ್ಯಾತನಕೇರಿ ಗ್ರಾಮಸ್ಥರು ‘ನಮ್ಮ ಅನುಮತಿ ಇಲ್ಲದೆ ದೇವಸ್ಥಾನ ನಿರ್ಮಾಣ ಹೇಗೆ ಮಾಡುತ್ತೀರಿ?’ ಎಂದು ಪ್ರಶ್ನಿಸಿ ತಕರಾರು ತೆಗೆದಿದ್ದಾರೆ.

ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವಾರು ವಾಹನಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಗುಡ್ಡದ ಪ್ರದೇಶ ಹಾಗೂ ಎರಡೂ ಗ್ರಾಮಗಳಲ್ಲಿ ಪೊಲೀಸ್ ಕಾವಲು ಬಿಗಿಗೊಳಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು, ದೇವಸ್ಥಾನ ವಿವಾದಕ್ಕೆ ಸಂಬಂಧಿಸಿ ಶಾಂತಿ ಸಭೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share