Friday, July 24, 2026
Join WhatsApp Group
HomeStateಯಮದೂತರಾದ ಖಾಸಗಿ ಬಸ್‌ಗಳು

ಯಮದೂತರಾದ ಖಾಸಗಿ ಬಸ್‌ಗಳು

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಬಸ್‌ಗಳ ಪ್ರಯಾಣ ದಿನೇ ದಿನೇ ಅಪಾಯಕಾರಿಯಾಗಿ ಪರಿಣಮಿಸುತ್ತಿದ್ದು, ರಸ್ತೆ ಸುರಕ್ಷತೆ ಕುರಿತು ಗಂಭೀರ ಆತಂಕಗಳು ವ್ಯಕ್ತವಾಗುತ್ತಿವೆ.

ಕಳೆದ ಆರು ವರ್ಷಗಳಲ್ಲಿ ಅಪಘಾತಗಳ ಪ್ರಮಾಣ ಭಾರೀ ಏರಿಕೆಯಾಗಿರುವುದು ಸಾರ್ವಜನಿಕರು ಹಾಗೂ ಅಧಿಕಾರಿಗಳ ಚಿಂತೆಗೆ ಕಾರಣವಾಗಿದೆ.

ಖಾಸಗಿ ಮಾಧ್ಯಮವೊಂದರ ವರದಿಯ ಪ್ರಕಾರ, ಕರ್ನಾಟಕದಲ್ಲಿ ಖಾಸಗಿ ಬಸ್‌ಗಳ ಅಪಘಾತಗಳು ಹಿಂದೆಂದಿಗಿಂತಲೂ ಮಿತಿಮೀರಿವೆ. ರಸ್ತೆ ಸುರಕ್ಷತಾ ನಿಯಮಗಳ ಜಾರಿ, ವಾಹನಗಳ ನಿರ್ವಹಣೆ ಹಾಗೂ ಬಸ್ ಮಾಲೀಕರ ಹೊಣೆಗಾರಿಕೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, 2020ರಿಂದ 2025ರವರೆಗೆ ರಾಜ್ಯದಲ್ಲಿ ಖಾಸಗಿ ಬಸ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 3,823 ಅಪಘಾತ ಪ್ರಕರಣಗಳು ದಾಖಲಾಗಿವೆ. ಈ ದುರ್ಘಟನೆಗಳಲ್ಲಿ 1,127 ಮಂದಿ ಪ್ರಾಣ ಕಳೆದುಕೊಂಡಿದ್ದು, 7,149 ಮಂದಿ ಗಾಯಗೊಂಡಿದ್ದಾರೆ. ಈ ಅಂಕಿ-ಅಂಶಗಳು ಪರಿಸ್ಥಿತಿಯ ಗಂಭೀರತೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ.

ವರ್ಷದಿಂದ ವರ್ಷಕ್ಕೆ ಅಪಘಾತಗಳ ಏರಿಕೆ ಆತಂಕಕಾರಿ ಮಟ್ಟ ತಲುಪಿದೆ. 2020ರಲ್ಲಿ 335 ಪ್ರಕರಣಗಳು ದಾಖಲಾಗಿದ್ದರೆ, 2025ರಲ್ಲಿ ಈ ಸಂಖ್ಯೆ 847ಕ್ಕೆ ಏರಿಕೆಯಾಗಿದೆ.

ಅಂದರೆ, ಆರು ವರ್ಷಗಳಲ್ಲಿ ಶೇಕಡಾ 153ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಾವಿನ ಪ್ರಮಾಣವೂ ಶೇಕಡಾ 120ಕ್ಕೂ ಹೆಚ್ಚು ಹೆಚ್ಚಾಗಿದೆ. ಗಾಯಾಳುಗಳ ಸಂಖ್ಯೆ 675ರಿಂದ 1,803ಕ್ಕೆ ಏರಿದ್ದು, ಸುಮಾರು ಮೂರು ಪಟ್ಟು ಹೆಚ್ಚಾಗಿದೆ.

ಈ ಆತಂಕಕಾರಿ ಬೆಳವಣಿಗೆಗೆ ಹಲವು ಕಾರಣಗಳನ್ನು ತಜ್ಞರು ಸೂಚಿಸುತ್ತಿದ್ದಾರೆ. ಚಾಲಕರ ಅಜಾಗರೂಕತೆ, ಅತಿವೇಗದ ಚಾಲನೆ, ವಾಹನಗಳ ತಾಂತ್ರಿಕ ದೋಷಗಳು ಹಾಗೂ ಟ್ರಾಫಿಕ್ ನಿಯಮಗಳ ಉಲ್ಲಂಘನೆ ಪ್ರಮುಖ ಕಾರಣಗಳಾಗಿವೆ.

ಹೆಚ್ಚು ಟ್ರಿಪ್‌ಗಳಿಗಾಗಿ ಚಾಲಕರು ಅತಿವೇಗವಾಗಿ ವಾಹನ ಚಲಾಯಿಸುವುದು, ವಾಹನಗಳ ಕಳಪೆ ನಿರ್ವಹಣೆ, ಚಾಲಕರ ದಣಿವು, ಮಿತಿಗಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವುದು ಮತ್ತು ಕಡ್ಡಾಯ ಫಿಟ್ನೆಸ್ ಪರೀಕ್ಷೆಗಳನ್ನು ನಿರ್ಲಕ್ಷಿಸುವುದು ಅಪಘಾತಗಳಿಗೆ ಕಾರಣವಾಗುತ್ತಿದೆ.

ಸಾರಿಗೆ ಮತ್ತು ಪೊಲೀಸ್ ಇಲಾಖೆಗಳು ಆಗಾಗ ದಾಳಿಗಳನ್ನು ನಡೆಸುತ್ತಿದೆಯಾದರೂ, ನಿಯಮಗಳ ಜಾರಿಯಲ್ಲಿ ನಿರಂತರತೆ ಕಾಣಿಸದಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಕೇವಲ ಅಪಘಾತಗಳ ನಂತರ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಮುಂಚಿತವಾಗಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share