Monday, July 27, 2026
Join WhatsApp Group
HomeCrimeಬಿಣಗಾ ರಸ್ತೆಯಲ್ಲಿ ಬಯಲಾಯ್ತು ಗಾಂಜಾ ಡೀಲ್!

ಬಿಣಗಾ ರಸ್ತೆಯಲ್ಲಿ ಬಯಲಾಯ್ತು ಗಾಂಜಾ ಡೀಲ್!

ಬೈಕ್‌ ಮೇಲೆ ಬಂದ ಇಬ್ಬರು ಯುವಕರು ಪೊಲೀಸ್ ಬಲೆಗೆ

ಕಾರವಾರ: ಮಧ್ಯಾಹ್ನದ ಹೊತ್ತಲ್ಲಿ ಬಿಣಗಾ–ರಾಮನಗರ ರಸ್ತೆಯಲ್ಲಿ ಎಲ್ಲವೂ ಸಹಜವಾಗಿಯೇ ಕಾಣಿಸುತ್ತಿತ್ತು. ಆದರೆ, ಆ ರಸ್ತೆಯಲ್ಲೇ ಮಾದಕ ವಸ್ತು ಮಾರಾಟಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಕಾರವಾರ ಗ್ರಾಮೀಣ ಪೊಲೀಸರ ಕೈ ಸೇರಿದ ಕ್ಷಣದಿಂದಲೇ ಕಾರ್ಯಾಚರಣೆ ಆರಂಭವಾಗಿ, ಕೆಲವೇ ನಿಮಿಷಗಳಲ್ಲಿ ಇಬ್ಬರು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಂಧಿತರನ್ನು ನಾಗರಾಜ ಮಲ್ಲಿಕಾರ್ಜುನ ಹಡಪದ (26), ತಾರಿವಾಡಾ, ಸದಾಶಿವಗಡ ಹಾಗೂ ವಿನೋದ ಕುಮಾರ ಆನಂದ (26), ಮೂಲತಃ ರಾಮನಗರ ಜಿಲ್ಲೆ, ಹಾಲಿ ತಾರಿವಾಡಾ, ಸದಾಶಿವಗಡ ಎಂದು ಗುರುತಿಸಲಾಗಿದೆ.

ಪೊಲೀಸ್ ಉಪನಿರೀಕ್ಷಕ ನೇಹಾಲ ಖಾನ್ ಅವರ ದೂರಿನ ಪ್ರಕಾರ, ಜುಲೈ 27ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರವಾರ ತಾಲೂಕಿನ ಬಿಣಗಾ–ರಾಮನಗರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಇಬ್ಬರೂ ಯಾವುದೇ ಪರವಾನಗಿ ಇಲ್ಲದೆ ಗಾಂಜಾ ಮಾರಾಟಕ್ಕೆ ಗಿರಾಕಿಗಳಿಗಾಗಿ ಹೊಂಚು ಹಾಕಿದ್ದರು.

ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ, ಅವರ ಬಳಿ ಸುಮಾರು 465 ಗ್ರಾಂ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ₹25 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.

ಇದಷ್ಟೇ ಅಲ್ಲ, ಆರೋಪಿಗಳಿಂದ ರಿಯಲ್‌ಮಿ ಕಂಪನಿಯ ಮೊಬೈಲ್ ಫೋನ್, ಕೆಎ-30/ಡಬ್ಲ್ಯೂ-2276 ಸಂಖ್ಯೆಯ ಬಜಾಜ್ ಪಲ್ಸರ್ ಬೈಕ್ ಹಾಗೂ ₹250 ನಗದು ಕೂಡ ಜಪ್ತಿ ಮಾಡಲಾಗಿದೆ.

ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ಗಾಂಜಾ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಹಾಗೂ ಈ ಜಾಲದ ಹಿಂದೆ ಇನ್ನಾರಾದರೂ ಇದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share