Monday, July 27, 2026
Join WhatsApp Group
HomeLocal Newsಚರ್ಮಕಾರರ ಸಂಕಷ್ಟಕ್ಕೆ ಸ್ಪಂದಿಸಿದ ರೂಪಾಲಿ ನಾಯ್ಕ 

ಚರ್ಮಕಾರರ ಸಂಕಷ್ಟಕ್ಕೆ ಸ್ಪಂದಿಸಿದ ರೂಪಾಲಿ ನಾಯ್ಕ 

ಕಾರವಾರ: ಮಳೆಗಾಲದಲ್ಲಿ ಅಂಗಡಿಯೊಳಗೆ ನೀರು ಸೋರುವ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ಕಾರವಾರ ಮುಖ್ಯರಸ್ತೆಯ ಚರ್ಮಕಾರ ಕುಟೀರ (ಚಪ್ಪಲಿ ಹೊಲಿಯುವ ಅಂಗಡಿ)ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಸಂತೋಷ ನಾಯ್ಕ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಶೀಟ್ ಅಳವಡಿಸಿ ನೆರವಾಗಿದ್ದಾರೆ.

ಮಳೆ ಬಂದಾಗ ಮಳೆ ನೀರು ನೇರವಾಗಿ ಅಂಗಡಿಯೊಳಗೆ ಬಂದು, ಕೆಲಸ ನಿರ್ವಹಿಸಲು ತೀವ್ರ ತೊಂದರೆಯಾಗುತ್ತಿದೆ. ಅಂಗಡಿಗೆ ಶೀಟ್ ಅಳವಡಿಸಿಕೊಡುವಂತೆ ಚರ್ಮಕಾರರು ರೂಪಾಲಿ ನಾಯ್ಕ ಅವರಲ್ಲಿ ಮನವಿ ಮಾಡಿದ್ದರು.

ಅವರ ಮನವಿಗೆ ಸ್ಪಂದಿಸಿದ ರೂಪಾಲಿ ನಾಯ್ಕ, ತಮ್ಮ ಸ್ವಂತ ಖರ್ಚಿನಲ್ಲಿ ಅಂಗಡಿಗೆ ಶೀಟ್ ಅಳವಡಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದಾರೆ.

ಸಹಾಯಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿರುವ ಚರ್ಮಕಾರರು, ಮಳೆಗಾಲದಲ್ಲಿ ತಮ್ಮ ಜೀವನೋಪಾಯಕ್ಕೆ ಎದುರಾಗಿದ್ದ ಸಮಸ್ಯೆಯನ್ನು ನಿವಾರಿಸಿದ ರೂಪಾಲಿ ನಾಯ್ಕ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share