Friday, July 24, 2026
Join WhatsApp Group
HomeLocal Newsದೇವರ ಎದುರೇ ಮಾರಾಮಾರಿ; 10 ಜನರ ವಿರುದ್ಧ ಪ್ರಕರಣ

ದೇವರ ಎದುರೇ ಮಾರಾಮಾರಿ; 10 ಜನರ ವಿರುದ್ಧ ಪ್ರಕರಣ

ಕಾರವಾರ: ನಗರದ ಸಾಯಿಕಟ್ಟಾ ಸಾಯಿಮಂದಿರ ಎದುರು ಎರಡು ಗುಂಪಿನ ನಡುವೆ ನಡೆದ ಗಲಾಟೆ ಹಿನ್ನೆಲೆಯಲ್ಲಿ 10 ಜನರ ವಿರುದ್ಧ ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 8ರಂದು ರಾತ್ರಿ ಸುಮಾರು 11.30ರ ವೇಳೆ ಸಾಯಿಕಟ್ಟಾ ಪ್ರದೇಶದಲ್ಲಿ ಎರಡು ಗುಂಪಿನವರು ಸಾರ್ವಜನಿಕ ಸ್ಥಳದಲ್ಲೇ ಪರಸ್ಪರ ಹೊಡೆದಾಡಿಕೊಂಡು ಶಾಂತಿಭಂಗ ಉಂಟುಮಾಡಿದ್ದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಿದರು.

ಈ ಸಂಬಂಧ ವಿದ್ಯಾಧರ ಮೇತ್ರಿ, ಕೃಷ್ಣಾನಂದ ನಾಯ್ಕ, ಜಗದೀಶ ನಾಯ್ಕ, ಸಂಜಯ ನಾಯ್ಕ, ಓಂಕಾರ ನಾಯ್ಕ, ಸಾಯಿಕಿರಣ ಪಂಚೇಕರ, ರೋಹನ ನಾಯ್ಕ, ವಿಜಯ ಮೊಗೇರ, ವೈಭವ ಕುಡ್ತರಕರ ಹಾಗೂ ವೇದ ಪಾವಸ್ಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರಿಗೆ ಭಯ, ಆತಂಕ ಹಾಗೂ ತೊಂದರೆ ಉಂಟುಮಾಡಿದ ಆರೋಪದಡಿ ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share