Friday, July 24, 2026
Join WhatsApp Group
HomeLocal Newsಓಸಿ ಅಡ್ಡೆಯ ಮೇಲೆ ಪೊಲೀಸ್ ದಾಳಿ; ವ್ಯಕ್ತಿ ಬಂಧನ

ಓಸಿ ಅಡ್ಡೆಯ ಮೇಲೆ ಪೊಲೀಸ್ ದಾಳಿ; ವ್ಯಕ್ತಿ ಬಂಧನ

ಮುಂಡಗೋಡ: ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಓಣಿಕೇರಿ ನಿವಾಸಿ ಸುಂಕಪ್ಪ ದೇವೇಂದ್ರಪ್ಪ ಕೊರವರ (46) ಎಂದು ಗುರುತಿಸಲಾಗಿದೆ.

ಜೂನ್ 25ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಓಣಿಕೇರಿ ಗ್ರಾಮದಿಂದ ಕೊಪ್ಪರಸಿಕೊಪ್ಪಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿರುವ ಕೆರೆಯ ಸಮೀಪ ಆರೋಪಿಯು ಸಾರ್ವಜನಿಕರನ್ನು ಕೂಗಿ ಕರೆದು ಲಾಭದ ಆಮಿಷವೊಡ್ಡಿ ಜೂಜಾಟ ನಡೆಸುತ್ತಿದ್ದ ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಗೌಡರ ನೇತೃತ್ವದಲ್ಲಿ ಪೊಲೀಸರು ಪಂಚರ ಸಮಕ್ಷಮ ದಾಳಿ ನಡೆಸಿದರು. ಈ ವೇಳೆ ಆರೋಪಿಯನ್ನು ಬಂಧಿಸಿ, ₹710 ನಗದು, ಒಂದು ಬಾಲ್ ಪೆನ್, ಓಸಿ ಅಂಕೆ ಬರೆದ ಚೀಟಿ ಮುಂತಾದವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share