Saturday, May 30, 2026
HomeLocal Newsಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಗೆ ಹೊಸ ಚೈತನ್ಯ

ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಗೆ ಹೊಸ ಚೈತನ್ಯ

ಯಲ್ಲಾಪುರ: ಗ್ರಾಮೀಣ ಭಾಗಗಳ ಅಭಿವೃದ್ಧಿಗೆ, ಮೂಲಸೌಕರ್ಯ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ನಂದೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣಲಗಾರ ಗೋಪಾಲಕೃಷ್ಣ ದೇವಾಲಯದ ಸಮೀಪ ಹಿತ್ಲಕಾರಗದ್ದೆ – ಮಾಗೋಡ ಜಿಲ್ಲಾ ಮುಖ್ಯ ರಸ್ತೆ ಹಾಗೂ ನಂದೊಳ್ಳಿ – ಅಣಲಗಾರ ಗೋಪಾಲಕೃಷ್ಣ ದೇವಸ್ಥಾನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸುಮಾರು 9.90 ಕೋಟಿ ರೂ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಕಾಮಗಾರಿಯಿಂದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಗೆ ಹೊಸ ಚೈತನ್ಯ ದೊರೆಯಲಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಉತ್ತಮ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದೂ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಕಾಮಗಾರಿಗೆ ಶುಭ ಹಾರೈಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share