Monday, September 7, 2026
Join WhatsApp Group
HomeCrimeಶ್ರೀಗಂಧ ಕಳ್ಳಸಾಗಣೆ ಯತ್ನ ವಿಫಲ

ಶ್ರೀಗಂಧ ಕಳ್ಳಸಾಗಣೆ ಯತ್ನ ವಿಫಲ

33.39 ಕೆಜಿ ಶ್ರೀಗಂಧ ವಶ, ಓರ್ವನ ಬಂಧನ

ಶಿರಸಿ: ಶಿರಸಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಕಾನಗೋಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಕೆತ್ತನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

ಬಂಧಿತನನ್ನು ಕಾನಗೋಡ ಗ್ರಾಮದ ಜನತಾ ಕಾಲೋನಿಯ ದಯಾನಂದ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಮಶಿಗದ್ದೆ ಹೊಳೆಕೈನ ಮಂಜುನಾಥ ಅಣ್ಣಪ್ಪ ದೇವಾಡಿಗ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ.

ಕಾರ್ಯಾಚರಣೆಯ ವೇಳೆ ಆರೋಪಿಗಳಿಂದ 33.390 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ಸಂದೀಪ್ ಸೂರ್ಯವಂಶಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಅಮಿತಕುಮಾರ ಚವ್ಹಾಣ ಅವರ ಮಾರ್ಗದರ್ಶನದಲ್ಲಿ, ಶಿರಸಿ ವಲಯ ಅರಣ್ಯಾಧಿಕಾರಿ ಭವ್ಯಾ ನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ ನಾರ್ವೆಕರ, ಅರಣ್ಯ ವನಪಾಲಕರಾದ ರೋಹಿತ್ ಎಂ. ನಾಯ್ಕ ಹಾಗೂ ಮಂಜುನಾಥ ಜಹಗೀರದಾರ ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share