Friday, July 24, 2026
Join WhatsApp Group
HomeLocal Newsಜಲಸಾಹಸ ಕ್ರೀಡೆಗಳಿಗೆ ನಿಷೇಧ; ಆದೇಶ ವಾಪಸ್

ಜಲಸಾಹಸ ಕ್ರೀಡೆಗಳಿಗೆ ನಿಷೇಧ; ಆದೇಶ ವಾಪಸ್

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಡಲತೀರ ಹಾಗೂ ನದಿ ಪ್ರದೇಶಗಳಲ್ಲಿ ಪ್ರವಾಸಿಗರಿಗಾಗಿ ನಡೆಸಲಾಗುತ್ತಿರುವ ಬೋಟಿಂಗ್‌ ಮತ್ತು ಜಲಸಾಹಸ ಕ್ರೀಡೆ ಚಟುವಟಿಕೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಮುಂದುವರಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ.

ಈ ಮೊದಲು ಭಾರತೀಯ ಹವಾಮಾನ ಇಲಾಖೆಯಿಂದ ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಮುನ್ಸೂಚನೆ ಬಂದ ಹಿನ್ನೆಲೆಯಲ್ಲಿ ಹಾಗೂ ಮಳೆಗಾಲ ಆರಂಭವಾಗುತ್ತಿರುವ ಕಾರಣ ಜಿಲ್ಲೆಯ ವಿವಿಧ ಕಡಲತೀರ ಮತ್ತು ನದಿ ಪ್ರದೇಶಗಳಲ್ಲಿ ನಡೆಯುತ್ತಿದ್ದ ಪ್ರವಾಸಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿತ್ತು.

ಆದರೆ ಮೇ 19ರ ಸಂಜೆಯಿಂದ ಕಡಲತೀರ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿರುವುದು ಹಾಗೂ ದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ, ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ ಸುರಕ್ಷತಾ ಕ್ರಮಗಳೊಂದಿಗೆ ಚಟುವಟಿಕೆಗಳನ್ನು ಮರು ಆರಂಭಿಸಲು ಅನುಮತಿ ನೀಡಲಾಗಿದೆ.

ಜಿಲ್ಲೆಯ Gokarna Main Beach, Om Beach, Kudle Beach, Half Moon Beach, Paradise Beach, Murudeshwar Beach ಹಾಗೂ Karwar Beach ಪ್ರದೇಶಗಳಲ್ಲಿ ಪ್ರವಾಸಿ ಬೋಟಿಂಗ್‌ ಮತ್ತು ಜಲಸಾಹಸ ಕ್ರೀಡೆಗಳನ್ನು ಮುಂದುವರಿಸಲು ಅವಕಾಶ ನೀಡಲಾಗಿದೆ.

Netrani Islandನಲ್ಲಿ ಸ್ಕೂಬಾ ಡೈವಿಂಗ್‌, ಕುಮಟಾ ತಾಲೂಕಿನ ತದಡಿ ಅಘನಾಶಿನಿ ನದಿ ತೀರ, ಹೊನ್ನಾವರ ಹಾಗೂ ಕಾಸರಕೋಡು ಭಾಗದ ಶರಾವತಿ ಹಿನ್ನೀರಿನಲ್ಲಿ ಬೋಟಿಂಗ್‌ ಚಟುವಟಿಕೆಗಳು ಹಾಗೂ ಅಪ್ಸರಕೊಂಡ ಬೀಚ್‌ನಲ್ಲಿ ಪ್ರೀವೆಡ್ಡಿಂಗ್ ಸೆಟ್‌ ಅಳವಡಿಕೆಗೂ ಅನುಮತಿ ಮುಂದುವರಿಸಲಾಗಿದೆ.

ಮುಂದಿನ ಆದೇಶದವರೆಗೆ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಈ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share