Friday, July 24, 2026
Join WhatsApp Group
HomeLocal Newsಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 30ನೇ ವರ್ಷದ ವರ್ಧಂತಿ ಉತ್ಸವ

ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 30ನೇ ವರ್ಷದ ವರ್ಧಂತಿ ಉತ್ಸವ

ಯಲ್ಲಾಪುರ: ಇಲ್ಲಿನ ಗಣೇಶಪುರಂನ ನವಗ್ರಹಸಹಿತ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 30ನೇ ವರ್ಷದ ವರ್ಧಂತಿ ಉತ್ಸವವನ್ನು ಮೇ 5, 2026 (ಮಂಗಳವಾರ)ರಂದು ಅಂಗಾರಕ ಸಂಕಷ್ಟಿ ಅಂಗವಾಗಿ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.

ವಿಶ್ವ ಹಿಂದೂ ಪರಿಷತ್ ಆಶ್ರಯದಲ್ಲಿ ನಡೆಯುವ ಈ ವಿಶೇಷ ಅಂಗಾರಕ ಸಂಕಷ್ಟಿ ಪ್ರಯುಕ್ತ ದಿನಪೂರ್ತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಪೂಜೆಗಳು ಪ್ರಾರಂಭವಾಗಿ, ಭಕ್ತರ ಶ್ರೇಯೋಭಿವೃದ್ಧಿಗಾಗಿ ಶ್ರೀ ದೇವರಲ್ಲಿ 108 ಬ್ರಹ್ಮ ಕಲಶಾಭಿಷೇಕ, ಶುದ್ಧಿ ಹೋಮ, ನವಗ್ರಹ ಹವನ, ಗಣಹವನ ಹಾಗೂ ಅಥರ್ವಶೀರ್ಷ ಹವನಗಳು ನೆರವೇರಲಿವೆ.

ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ, ಸಾಮೂಹಿಕ ಪ್ರಾರ್ಥನೆ ಹಾಗೂ ಪ್ರಸಾದ ಭೋಜನ ನಡೆಯಲಿದೆ. ಸಂಜೆ 6ರಿಂದ 8 ಗಂಟೆಯವರೆಗೆ ಭಜನಾ ಕಾರ್ಯಕ್ರಮ ಮತ್ತು ರಾತ್ರಿ 8.30ರಿಂದ 9.30ರವರೆಗೆ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share