Monday, September 7, 2026
Join WhatsApp Group
HomeCrimeಯಲ್ಲಾಪುರದಲ್ಲಿ ಓಸಿ ಜೂಜಾಟ: ಇಬ್ಬರ ವಿರುದ್ಧ ಪ್ರಕರಣ

ಯಲ್ಲಾಪುರದಲ್ಲಿ ಓಸಿ ಜೂಜಾಟ: ಇಬ್ಬರ ವಿರುದ್ಧ ಪ್ರಕರಣ

ಯಲ್ಲಾಪುರ: ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಯಲ್ಲಾಪುರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಯಲ್ಲಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಜಶೇಖರ ವಂದಲಿ ಅವರು ನೀಡಿದ ದೂರಿನ ಆಧಾರದಲ್ಲಿ ಇಡಗುಂದಿಯ ಜನತಾ ಕಾಲೋನಿ ನಿವಾಸಿಗಳಾದ ಸಂತೋಷ ರಾಮಚಂದ್ರ ನಾಯ್ಕ ಹಾಗೂ ಜಲಾಲುದ್ದಿನ್ ಅಹ್ಮದಸಾಬ ಶೇಖ ವಿರುದ್ಧ ಪ್ರಕರಣ ದಾಖಲಾಗಿದೆ.

ಮೊದಲ ಆರೋಪಿ ಸಂತೋಷ ರಾಮಚಂದ್ರ ನಾಯ್ಕ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಲಾಭಕ್ಕಾಗಿ 1ಕ್ಕೆ 80 ರೂ ನೀಡುವುದಾಗಿ ಆಮಿಷವೊಡ್ಡಿ ಓಸಿ ಮಟಕಾ ಜೂಜಾಟ ಆಡಿಸುತ್ತಿದ್ದ ಪೊಲೀಸರು ಪಂಚರು ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದಾಗ ಆರೋಪಿ ಸಂತೋಷನ ಬಳಿಯಿಂದ 1,120 ರೂ ನಗದು, ಓಸಿ ಮಟಕಾ ಅಂಕಿ-ಸಂಖ್ಯೆ ಬರೆದ ಒಂದು ಚೀಟಿ ಹಾಗೂ ಒಂದು ಪೆನ್ ವಶಪಡಿಸಿಕೊಳ್ಳಲಾಗಿದೆ.

ಜೂಜಾಟದಿಂದ ಸಂಗ್ರಹಿಸಿದ ಹಣ ಹಾಗೂ ಅಂಕಿ-ಸಂಖ್ಯೆ ಬರೆದ ಚೀಟಿಯನ್ನು ಎರಡನೇ ಆರೋಪಿ ಜಲಾಲುದ್ದಿನ್ ಈತನಿಗೆ ನೀಡುತ್ತಿದ್ದುದಾಗಿ ಮೊದಲ ಆರೋಪಿ ತಿಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share